Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:5 - ಕನ್ನಡ ಸಮಕಾಲಿಕ ಅನುವಾದ

5 ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಯಾರನ್ನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲ್ಯರು ನಿವ್ಮಿುಬ್ಬರಿಗೆ ವಿರೋಧವಾಗಿ ಮಾಡುವ ಗುಣುಗುಟ್ಟುವಿಕೆಯು ನನಗೆ ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಒಬ್ಬನನ್ನು ನನ್ನ ಯಾಜಕನನ್ನಾಗಿ ಆರಿಸಿಕೊಳ್ಳುವೆನು; ಅವನ ಕೋಲು ಚಿಗುರುವುದು, ಇಸ್ರೇಲ್ ಜನರು ನಿಮ್ಮ ವಿರುದ್ಧವಾಗಿ ಹೇಳುತ್ತಿರುವ ದೂರುಗಳನ್ನು ನಾನು ಹೀಗೆ ನಿಲ್ಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:5
21 ತಿಳಿವುಗಳ ಹೋಲಿಕೆ  

ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.


ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.


ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.


ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.


ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು