Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:3 - ಕನ್ನಡ ಸಮಕಾಲಿಕ ಅನುವಾದ

3 ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಲೇವಿಯರು ನಿನ್ನ ಅಪ್ಪಣೆಯ ಮೇರೆಗೆ ನಡೆದು ಗುಡಾರವನ್ನೆಲ್ಲಾ ಕಾಯಬೇಕು; ಆದರೆ ಪವಿತ್ರಸ್ಥಾನದ ಸಾಮಾನಿನ ಹತ್ತಿರವಾಗಲಿ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವನು ಸಾಯುವದು ಮಾತ್ರವಲ್ಲದೆ ನೀವೂ ಸತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:3
12 ತಿಳಿವುಗಳ ಹೋಲಿಕೆ  

“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.


ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.


ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು