Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:13 - ಕನ್ನಡ ಸಮಕಾಲಿಕ ಅನುವಾದ

13 ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:13
27 ತಿಳಿವುಗಳ ಹೋಲಿಕೆ  

“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”


“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.


ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.


ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.


“ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.


ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.


ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


“ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು


ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು