Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:18 - ಕನ್ನಡ ಸಮಕಾಲಿಕ ಅನುವಾದ

18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:18
13 ತಿಳಿವುಗಳ ಹೋಲಿಕೆ  

ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.


“ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು.


ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು