Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:2 - ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನಾದ ನಾನು ಒಂದು ವಿಧಿಯನ್ನು ನೇವಿುಸಿದ್ದೇನೆ; ಅದೇನಂದರೆ - ಎಂದೂ ನೊಗವನ್ನು ಹೊರದ ಮತ್ತು ಯಾವ ಕುಂದು ಕೊರತೆಯೂ ಇಲ್ಲದ ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:2
21 ತಿಳಿವುಗಳ ಹೋಲಿಕೆ  

ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


“ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:


ಯಾಜಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಹಸುವಿನ ದಹನದಲ್ಲಿ ಹಾಕಬೇಕು.


ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,


ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.


ಯೆಹೋವ ದೇವರು ಮೋಶೆ ಹಾಗೂ ಆರೋನನ ಸಂಗಡ ಮಾತನಾಡಿ,


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು