Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:3 - ಕನ್ನಡ ಸಮಕಾಲಿಕ ಅನುವಾದ

3 ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡುಹೋಗಿ ತನಗೆ ಎದುರಾಗಿಯೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:3
11 ತಿಳಿವುಗಳ ಹೋಲಿಕೆ  

ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.


ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.


ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.


“ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.


“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.


ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.


ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು