Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:11 - ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೈಯೆತ್ತಿ ತನ್ನ ಕೈಯಲ್ಲಿರುವ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು; ಸಮೂಹದವರೂ ಅವರ ಪಶುಗಳೂ ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:11
24 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.


ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.


ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.


ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.


ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.


ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.


ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು