Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:17 - ಕನ್ನಡ ಸಮಕಾಲಿಕ ಅನುವಾದ

17 ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದುಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:17
7 ತಿಳಿವುಗಳ ಹೋಲಿಕೆ  

“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.


ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.


ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.


“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು