Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಎದೋಮ್ಯರು - ನೀವು ದಾಟಿಲೇಬಾರದು ಎಂದು ಉತ್ತರ ಕೊಟ್ಟು ಬಹುಜನ ಕೂಡಿಕೊಂಡು ಬಲಾತ್ಕಾರದಿಂದ ಎದುರಿಸುವವರಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:20
10 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.


ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.


ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.


ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.


ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು