Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:4 - ಕನ್ನಡ ಸಮಕಾಲಿಕ ಅನುವಾದ

4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಯೆಹೋವನ ಸಭೆಯವರಾದ ನಮ್ಮನ್ನೂ ನಮ್ಮ ಪಶುಗಳನ್ನೂ ಈ ಮರಳುಕಾಡಿಗೆ ಕರಕೊಂಡು ಬಂದು ಯಾಕೆ ಸಾಯಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:4
13 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.


“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.


ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.


ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,


ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು