Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಜನರನ್ನು ಕೂಡಿಸಿಕೋ, ನಾನು ಅವರಿಗೆ ಜಲಾಧಾರವನ್ನುಂಟುಮಾಡಿ ಕೊಡುವೆನು ಎಂದು ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವಾದದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:16
16 ತಿಳಿವುಗಳ ಹೋಲಿಕೆ  

“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.


ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.


ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.


ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು