Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:5 - ಕನ್ನಡ ಸಮಕಾಲಿಕ ಅನುವಾದ

5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:5
19 ತಿಳಿವುಗಳ ಹೋಲಿಕೆ  

ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.


ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?


ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.


ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.


ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.


ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ.


ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.


ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು