Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ಯೆಹೋವನು ಉರಿಮಂಡಲಗಳನ್ನು ಜನರೊಳಗೆ ಬರಮಾಡಿದನು; ಅವು ಜನರನ್ನು ಕಚ್ಚಿದ್ದರಿಂದ ಬಹುಜನ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:6
8 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು