Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವದನ್ನು ಅವನು ಕಂಡಾಗ ಅಡ್ಡಬಿದ್ದು ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:31
14 ತಿಳಿವುಗಳ ಹೋಲಿಕೆ  

ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.


ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.


ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.


ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:


ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:


ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬಾಗಿ ಅವರನ್ನು ಆರಾಧಿಸಿದನು.


ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು