Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:41 - ಕನ್ನಡ ಸಮಕಾಲಿಕ ಅನುವಾದ

41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:41
9 ತಿಳಿವುಗಳ ಹೋಲಿಕೆ  

ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.


ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, ತನ್ನ ದೇವರುಗಳಿಗೆ ಧೂಪಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.


“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.


ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.


ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.


ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು