Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:9 - ಕನ್ನಡ ಸಮಕಾಲಿಕ ಅನುವಾದ

9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿಯಲ್ಲಿರುವ ಈ ಮನುಷ್ಯರು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:9
16 ತಿಳಿವುಗಳ ಹೋಲಿಕೆ  

ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.


ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.


ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.


ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


“ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.


ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.


ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.


ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು