Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:23 - ಕನ್ನಡ ಸಮಕಾಲಿಕ ಅನುವಾದ

23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:23
31 ತಿಳಿವುಗಳ ಹೋಲಿಕೆ  

ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು.


ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.


ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


“ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು