Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ - ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:10
15 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.


ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.


“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.


ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”


ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”


ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.


‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.


ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.


ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”


ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.


ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.


ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು