Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:19 - ಕನ್ನಡ ಸಮಕಾಲಿಕ ಅನುವಾದ

19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರೋ ಬಲಗೊಂಡವರು; ಯಾಕೋಬ್ಯರಿಗೇ ದೊರೆತನವಾಯಿತು; ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:19
19 ತಿಳಿವುಗಳ ಹೋಲಿಕೆ  

ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.


ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು