Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:4 - ಕನ್ನಡ ಸಮಕಾಲಿಕ ಅನುವಾದ

4 ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:4
20 ತಿಳಿವುಗಳ ಹೋಲಿಕೆ  

ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


“ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.


ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.


ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕೆನಿಸಿತು. ಊಟ ಸಿದ್ಧತೆಯಾಗುತ್ತಿದ್ದಾಗ ಅವನು ಧ್ಯಾನ ಪರವಶನಾದನು.


ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.


ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.


ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.


ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.


ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬೆಯೋರನ ಮಗ ಬಿಳಾಮನು ಹೇಳಿದ್ದು: ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು.


ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು