Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:13 - ಕನ್ನಡ ಸಮಕಾಲಿಕ ಅನುವಾದ

13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:13
34 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”


ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.


ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?


ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.


ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.


ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ.


ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.


ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು.


ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ.


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು