Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:8 - ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:8
10 ತಿಳಿವುಗಳ ಹೋಲಿಕೆ  

ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.


ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


“ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.


ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.


“ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.


ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.


ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.


ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು