Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:16 - ಕನ್ನಡ ಸಮಕಾಲಿಕ ಅನುವಾದ

16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಎಲ್ಲಾ ಮನುಷ್ಯರ ಯೋಚನೆಗಳನ್ನು ತಿಳಿದಿರುವ ದೇವರಾದ ಯೆಹೋವನು ಈ ಸಮೂಹಕ್ಕೆ ಒಬ್ಬ ನಾಯಕನನ್ನು ನೇಮಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:16
20 ತಿಳಿವುಗಳ ಹೋಲಿಕೆ  

ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ.


ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,


ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು