Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:6 - ಕನ್ನಡ ಸಮಕಾಲಿಕ ಅನುವಾದ

6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 (ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:6
15 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?


ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.


ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.


ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.


ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.


ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.


ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು