Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:12 - ಕನ್ನಡ ಸಮಕಾಲಿಕ ಅನುವಾದ

12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:12
16 ತಿಳಿವುಗಳ ಹೋಲಿಕೆ  

ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.


ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.


“ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು