Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:6 - ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:6
14 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,


ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,


ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.


“ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು