Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:7 - ಕನ್ನಡ ಸಮಕಾಲಿಕ ಅನುವಾದ

7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉಪವಾಸಾಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮಾಡದೆ ದೇವಾರಾಧನೆಗಾಗಿ ಸಭೆಕೂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:7
17 ತಿಳಿವುಗಳ ಹೋಲಿಕೆ  

ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.


ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,


ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು