Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:31 - ಕನ್ನಡ ಸಮಕಾಲಿಕ ಅನುವಾದ

31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರು ಕಾಪಾಡಬೇಕಾದವುಗಳು ಯಾವವಂದರೆ - ಮಂಜೂಷವೂ ಮೇಜೂ ದೀಪಸ್ತಂಭವೂ ವೇದಿಗಳೂ ದೇವಸ್ಥಾನದ ಸೇವೋಪಕರಣಗಳೂ ಒಳಗಣ ತೆರೆಯೂ ಇವುಗಳೇ. ಇವುಗಳ ಸಕಲವಿಧವಾದ ಪರಿಚರ್ಯವನ್ನು ಅವರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:31
15 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು.


ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.


ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.


ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.


ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು