Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:38 - ಕನ್ನಡ ಸಮಕಾಲಿಕ ಅನುವಾದ

38 ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆಯೂ ಆರೋನನೂ ಆರೋನನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲ್ಯರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಮೋಶೆ, ಆರೋನ ಮತ್ತು ಆರೋನನ ಪುತ್ರರು ದೇವದರ್ಶನಗುಡಾರದ ಮುಂದೆ ಪವಿತ್ರ ಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯಮಾಡಿಕೊಂಡರು. ಪವಿತ್ರಸ್ಥಳವನ್ನು ನೋಡಿಕೊಳ್ಳುವ ಕೆಲಸ ಅವರಿಗೆ ಕೊಡಲ್ಪಟ್ಟಿತು. ಅವರು ಇಸ್ರೇಲರೆಲ್ಲರಿಗೋಸ್ಕರ ಇದನ್ನು ಮಾಡಿದರು. ಇವರ ಕರ್ತವ್ಯಗಳನ್ನು ಬೇರೆ ಯಾವನಾದರೂ ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:38
12 ತಿಳಿವುಗಳ ಹೋಲಿಕೆ  

ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.


ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.


ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.


ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.


ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು