Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:8 - ಕನ್ನಡ ಸಮಕಾಲಿಕ ಅನುವಾದ

8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:8
13 ತಿಳಿವುಗಳ ಹೋಲಿಕೆ  

ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು.


ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.


ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”


ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.


ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.


ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.


ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು