Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:9 - ಕನ್ನಡ ಸಮಕಾಲಿಕ ಅನುವಾದ

9 ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸಬೇಕು; ಇಸ್ರಾಯೇಲ್ಯರಲ್ಲಿ ಆರೋನನಿಗೆ ಸಂಪೂರ್ಣವಾಗಿ ವಶಮಾಡಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸಿಕೊಡು. ಅವರು ಇಸ್ರೇಲರ ಮಧ್ಯದಿಂದ ಆರೋನನಿಗೋಸ್ಕರವಾಗಿ ಪ್ರತಿಷ್ಠಿತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:9
15 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”


ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.


ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.


ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.


ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.


ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.


ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,


ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.


ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.


ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.


ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು