Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:50 - ಕನ್ನಡ ಸಮಕಾಲಿಕ ಅನುವಾದ

50 ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:50
10 ತಿಳಿವುಗಳ ಹೋಲಿಕೆ  

“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.


ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.


ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು