Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:8 - ಕನ್ನಡ ಸಮಕಾಲಿಕ ಅನುವಾದ

8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:8
21 ತಿಳಿವುಗಳ ಹೋಲಿಕೆ  

ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.


ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.


ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:


ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.


ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.


ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.


ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.


ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”


ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.


ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು