Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:9 - ಕನ್ನಡ ಸಮಕಾಲಿಕ ಅನುವಾದ

9 ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ‍ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲ್ಯರಿಗೆ ಅಧೈರ್ಯವನ್ನು ಹುಟ್ಟಿಸಿದದರಿಂದ ಇಸ್ರಾಯೇಲ್ಯರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:9
5 ತಿಳಿವುಗಳ ಹೋಲಿಕೆ  

ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.


ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು