Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:55 - ಕನ್ನಡ ಸಮಕಾಲಿಕ ಅನುವಾದ

55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:55
11 ತಿಳಿವುಗಳ ಹೋಲಿಕೆ  

ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.


ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”


“ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”


ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು