Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:2 - ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಸಮಸ್ತ ಕಾನಾನ್‍ದೇಶವೇ ನಿಮಗೆ ಸ್ವದೇಶವಾಗುವದಕ್ಕೆ ದೊರಕುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:2
23 ತಿಳಿವುಗಳ ಹೋಲಿಕೆ  

ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.


ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು