Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:19 - ಕನ್ನಡ ಸಮಕಾಲಿಕ ಅನುವಾದ

19 ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನರಹತ್ಯಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರಂದರೆ ಹತವಾದವನ ಸಮೀಪಬಂಧುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:19
16 ತಿಳಿವುಗಳ ಹೋಲಿಕೆ  

ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.


ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.


ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.


ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.


ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.


ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.


ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.


ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.


ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.


ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.


ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,


ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.


ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.


ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು