Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:30 - ಕನ್ನಡ ಸಮಕಾಲಿಕ ಅನುವಾದ

30 “ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:30
14 ತಿಳಿವುಗಳ ಹೋಲಿಕೆ  

ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.


ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’


ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.


ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.


ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.


“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


“ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.


ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು