Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:6 - ಕನ್ನಡ ಸಮಕಾಲಿಕ ಅನುವಾದ

6 “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯ ಹತ್ಯಮಾಡಿದವರು ಆಶ್ರಯಕ್ಕಾಗಿ ಓಡಿಹೋಗುವದಕ್ಕೋಸ್ಕರ ನೀವು ನೇವಿುಸುವ ಆರು ಆಶ್ರಯ ನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:6
18 ತಿಳಿವುಗಳ ಹೋಲಿಕೆ  

ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ


ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ:


ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ


ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.


ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, ಶೆಕೆಮನ್ನೂ ಗೆಜೆರನ್ನೂ


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.


ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.


ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು