Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:8 - ಕನ್ನಡ ಸಮಕಾಲಿಕ ಅನುವಾದ

8 ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:8
11 ತಿಳಿವುಗಳ ಹೋಲಿಕೆ  

ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.


ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು.


ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.


“ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು