Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:20
11 ತಿಳಿವುಗಳ ಹೋಲಿಕೆ  

ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.


ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು