Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:19 - ಕನ್ನಡ ಸಮಕಾಲಿಕ ಅನುವಾದ

19 ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:19
5 ತಿಳಿವುಗಳ ಹೋಲಿಕೆ  

ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.


“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,


ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.


ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.


ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು