Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:2 - ಕನ್ನಡ ಸಮಕಾಲಿಕ ಅನುವಾದ

2 “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:2
15 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.


ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.


ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.


“ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.


ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?


ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.


“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.


ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು.


“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು