Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:12 - ಕನ್ನಡ ಸಮಕಾಲಿಕ ಅನುವಾದ

12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:12
12 ತಿಳಿವುಗಳ ಹೋಲಿಕೆ  

ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.


“ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು