Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:15 - ಕನ್ನಡ ಸಮಕಾಲಿಕ ಅನುವಾದ

15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:15
15 ತಿಳಿವುಗಳ ಹೋಲಿಕೆ  

“ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.


ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.


ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.


ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”


ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.


“ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು