Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:20 - ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:20
24 ತಿಳಿವುಗಳ ಹೋಲಿಕೆ  

ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.


ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.


ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.


ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.


ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.


ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.


ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.


ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.


“ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು