Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:1 - ಕನ್ನಡ ಸಮಕಾಲಿಕ ಅನುವಾದ

1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:1
15 ತಿಳಿವುಗಳ ಹೋಲಿಕೆ  

ಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು: ಬೆಳ್ಳಿಯ 12 ತಟ್ಟೆಗಳೂ, ಬೆಳ್ಳಿಯ 12 ಬಟ್ಟಲುಗಳೂ, ಬಂಗಾರದ 12 ಚಮಚಗಳೂ,


ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?


ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.


ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.


ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.


ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು