Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:12 - ಕನ್ನಡ ಸಮಕಾಲಿಕ ಅನುವಾದ

12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಯೆಹೋವನಿಗೆ ದೋಷಪರಿಹಾರಕಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನೂ ಸಮರ್ಪಿಸಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:12
25 ತಿಳಿವುಗಳ ಹೋಲಿಕೆ  

“ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.


ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.


ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.


ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.


“ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.


ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.


ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.


“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.


“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.


ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.


ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.


ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.


ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.


ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು