Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:6
16 ತಿಳಿವುಗಳ ಹೋಲಿಕೆ  

ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,


ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.


“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.


“ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.


“ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.


ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.


ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು.


ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,


ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.


ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.


ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.


“ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು