Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:20 - ಕನ್ನಡ ಸಮಕಾಲಿಕ ಅನುವಾದ

20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:20
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.


ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನವರೆಗೂ ಹೇಳಿದನು. ಇದಲ್ಲದೆ ಮೃಗಗಳನ್ನು ಕುರಿತೂ, ಪಕ್ಷಿಗಳನ್ನು ಕುರಿತೂ, ಕ್ರಿಮಿಗಳನ್ನು ಕುರಿತೂ, ಮೀನುಗಳನ್ನು ಕುರಿತೂ ಪ್ರಸ್ತಾಪಿಸಬಲ್ಲವನಾಗಿದ್ದನು.


ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,


ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.


ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.


ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.


ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.


ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.


ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.


ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.


ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು